ಕವಿತೆ

ಅಂದು.. ಬಂದಿದ್ದೆ ನಾನು…

ದ್ರವ್ಯವೊಮ್ಮೆ ಬೆರೆವಾಗ
ನಾಚಿ ಕರಗಿತ್ತು ಲವಣ
ಆಯಸ್ಸುಗಳ ಪೇರಿಸುತ್ತ
ಆಕಾರ ಪಡೆಯಿತು ಮೌನ..
ರಕ್ತ ಸೋರುವ ಬಳ್ಳಿಗರಳಿದ
ಹೂವಿಗೆ ಶಿಶುವೆಂದು ನಾಮಕರಣ..
ಅಂದು.. ಬಂದಿದ್ದೆ ನಾನು..!

ತುಂಬಿಟ್ಟುಕೊಂಡ ಚೀಲದಲ್ಲಿ
ತೂರಿಬರುತ್ತಿದ್ದ ಆಹಾರ..
ತುರುಬಿಗೆ ಸಿಕ್ಕಿಸಿದ ಬಣ್ಣಗಳ
ಆಗಾಗ ಹೇಳುತ್ತಿದ್ದಳು ಅವಳು..
ಕಥನದಂತಿದ್ದ ನಾನು
ವಾಸ್ತವದ ಚಿಹ್ನೆಯಾಗಿದ್ದು
ನರಳುವಿಕೆಯ ತುದಿಯಲ್ಲಿ..
ಖಾಯಂ ವರ್ಗಾವಣೆಗೊಂಡು
ಅಂದು.. ಬಂದಿದ್ದೆ ನಾನು..!

ಮೊದಲ ಅಳುವಿಗೆ
ಹಬ್ಬವೆಂದರು ಅವರು..
ಬೆಳೆಯುತ್ತಿದ್ದ ಭಾಗಗಳ
ಕಡಿದಾದ ನೆರಳುಗಳಲ್ಲಿ
ಜಾರುತ್ತಿತ್ತು ಎದೆಯಿಂದಲೇನೋ..
ಅಂದು ಬಂದಿದ್ದ ನಾನು
ಮತ್ತೆ ಹೋಗಲೇ ಇಲ್ಲ..
ಓಡತೊಡಗಿದ್ದೇನೆ, ಸಿಗಲೂ ಇಲ್ಲ..
ಮತ್ತೆ ಬರಬೇಕೆಂದಿದೆ ಹೊಸದಾಗಿ;
ಕಿಂಡಿಯಿದೆಯಾ?!…!!

Facebook ಕಾಮೆಂಟ್ಸ್

ಲೇಖಕರ ಕುರಿತು

ಶ್ರೀ ತಲಗೇರಿ

ಸದ್ಯಕ್ಕೆ ಬೆಂಗಳೂರಿನಲ್ಲಿ ವಾಸ,ಆಗಾಗ ಲೇಖನಿ,ಕುಂಚಗಳ ಸಹವಾಸ..ಬದುಕಿನ ಬಣ್ಣಗಳಲ್ಲಿ ಪ್ರೀತಿಯ ಚಿತ್ರ ಬಿಡಿಸಿ ಖುಷಿಪಡುತ್ತ,ಶಬ್ದಗಳಿಗೆ ಜೀವ ಕೊಡುವ ಪ್ರಯತ್ನದಲ್ಲಿ ಪುಟ್ಟ ಪುಟ್ಟ ಹೆಜ್ಜೆ ಇಡುತ್ತಿರುವ ಕನಸು ಕಂಗಳ ಹುಡುಗ...

Subscribe To Our Newsletter

Join our mailing list to weekly receive the latest articles from our website

You have Successfully Subscribed!

ಸಾಮಾಜಿಕ ಜಾಲತಾಣಗಳಲ್ಲಿ ನಮನ್ನು ಬೆಂಬಲಿಸಿ!