Author

Guest Author

Joining hands in the journey of Readoo.in, the guest authors will render you stories on anything under the sun.

Shivaprasad Bhat

Engineer by profession writer by passion, Shivaprasad Bhat finds interest in Politics, Cricket, Acting etc. He tries to express his views on various issues through his writings.

Rohith Chakratheertha

ಓದಿದ್ದು ವಿಜ್ಞಾನ, ಮುಖ್ಯವಾಗಿ ಗಣಿತ. ಬೆಂಗಳೂರಿನಲ್ಲಿ ನಾಲ್ಕು ವರ್ಷ ಉಪನ್ಯಾಸಕನಾಗಿ ಕಾಲೇಜುಗಳಲ್ಲಿ ಪಾಠ ಮಾಡಿದ್ದ ಇವರು ಈಗ ಒಂದು ಬಹುರಾಷ್ಟ್ರೀಯ ಕಂಪೆನಿಯಲ್ಲಿ ಉದ್ಯೋಗಿ. ಹವ್ಯಾಸವಾಗಿ ಬೆಳೆಸಿಕೊಂಡದ್ದು ಬರವಣಿಗೆ. ಐದು ಪತ್ರಿಕೆಗಳಲ್ಲಿ ಸದ್ಯಕ್ಕೆ ಅಂಕಣಗಳನ್ನು ಬರೆಯುತ್ತಿದ್ದು ವಿಜ್ಞಾನ, ಗಣಿತ, ವ್ಯಕ್ತಿಚಿತ್ರ, ಮಕ್ಕಳ ಕತೆ ಇತ್ಯಾದಿ ಪ್ರಕಾರಗಳಲ್ಲಿ ಇದುವರೆಗೆ ೧೩ ಪುಸ್ತಕಗಳ ಪ್ರಕಟಣೆಯಾಗಿವೆ. ಉದ್ಯೋಗ ಮತ್ತು ಬರವಣಿಗೆಯಿಂದ ಬಿಡುವು ಸಿಕ್ಕಾಗ ತಿರುಗಾಟ, ಪ್ರವಾಸ ಇವರ ಖಯಾಲಿ.

Nagesha MN

ನಾಗೇಶ ಮೈಸೂರು : ಓದಿದ್ದು ಇಂಜಿನಿಯರಿಂಗ್ , ವೃತ್ತಿ - ಬಹುರಾಷ್ಟ್ರೀಯ ಸಂಸ್ಥೆಯೊಂದರಲ್ಲಿ.  ಪ್ರವೃತ್ತಿ - ಪ್ರಾಜೆಕ್ಟ್ ಗಳ ಸಾಂಗತ್ಯದಲ್ಲೆ ಕನ್ನಡದಲ್ಲಿ ಕಥೆ, ಕವನ, ಲೇಖನ, ಹರಟೆ ಮುಂತಾಗಿ ಬರೆಯುವ ಹವ್ಯಾಸ - ಹೆಚ್ಚಾಗಿ 'ಮನದಿಂಗಿತಗಳ ಸ್ವಗತ' ಬ್ಲಾಗಿನ ಅಖಾಡದಲ್ಲಿ . 'ಥಿಯರಿ ಆಫ್ ಕನ್ಸ್ ಟ್ರೈಂಟ್ಸ್' ನೆಚ್ಚಿನ ಸಿದ್ದಾಂತಗಳಲ್ಲೊಂದು. ಮ್ಯಾನೇಜ್ಮೆಂಟ್ ಸಂಬಂಧಿ ವಿಷಯಗಳಲ್ಲಿ ಹೆಚ್ಚು ಆಸಕ್ತಿ. 'ಗುಬ್ಬಣ್ಣ' ಹೆಸರಿನ ಪಾತ್ರ ಸೃಜಿಸಿದ್ದು ಲಘು ಹರಟೆಗಳ ಉದ್ದೇಶಕ್ಕಾಗಿ. ವೈಜ್ಞಾನಿಕ, ಆಧ್ಯಾತ್ಮಿಕ ಮತ್ತು ಸೈದ್ದಾಂತಿಕ ವಿಷಯಗಳಲ್ಲಿ ಆಸ್ಥೆ. ಸದ್ಯದ ಠಿಕಾಣೆ ವಿದೇಶದಲ್ಲಿ. ಮಿಕ್ಕಂತೆ ಸರಳ, ಸಾಧಾರಣ ಕನ್ನಡಿಗ

Rangaswamy mookanahalli

ಎರಡು ಸಾವಿರದ ಇಸವಿಯಲ್ಲಿ ಸ್ಪೇನ್’ನ ಒಂದು ರಾಜ್ಯ ಕತಲೂನ್ಯದ ರಾಜಧಾನಿ ಬಾರ್ಸಿಲೋನಾದಲ್ಲಿ ಇಳಿದಾಗ ಸ್ಪಾನೀಷ್ ಭಾಷೆಯ ಗಂಧಗಾಳಿ ಇಲ್ಲದ, ಜೀವನ ಕರೆದತ್ತ ಮುಖಮಾಡಿ ಹೊರಟ ಲೇಖಕರು ಇಂದು ಸ್ಪಾನಿಷ್ ಭಾಷೆಯನ್ನ ಕನ್ನಡದಷ್ಟೇ ಸುಲಲಿತವಾಗಿ ಮಾತಾಡಬಲ್ಲರು . ಒಂದೂವರೆ ದಶಕಕ್ಕೂ ಹೆಚ್ಚಿನ ಅಲ್ಲಿನ ನೆಲದ ನಂಟು ಅಲ್ಲಿನ ಜನರೊಂದಿನ ಒಡನಾಟ ಅಲ್ಲಿನ ಗಾದೆಗಳನ್ನ ಕಲಿಸುತ್ತದೆ . ಅಲ್ಲಿನ ಗಾದೆಗಳು ನಮ್ಮ ಗಾದೆಗಳಂತೆಯೆ ಇದೆಯಲ್ಲ ಎನ್ನುವ ಸಹಜ ಕುತೂಹಲ ಕನ್ನಡಿಗರಿಗೆ ಸ್ಪಾನಿಷ್ ಗಾದೆಗಳು ಬರೆಯಲು ಪ್ರೇರಣೆ .

Shruthi Rao

A cancer survivor dwells in a village of hosanagara. Author of Kannada book 'Baduku dikku badalisida osteosarcoma', and recepient of Karnataka sahitya academy award.

Sudeep Bannur

Working as an Engineer, Loves being a Writer. Finds interest in Politics, Cricket, Acting, Mimicry, Cooking, Travelling.

Prasanna Hegde

ಹೆಸರು ಪ್ರಸನ್ನ ಹೆಗಡೆ.ಹುಟ್ಟಿದ್ದು,ಬೆಳೆದಿದ್ದು ಬದುಕನ್ನ ಅನುಭವಿಸಿದ್ದು ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಸಮೀಪದ ಹಳ್ಳಿಯೊಂದರಲ್ಲಿ.ನನ್ನ camera,ಪ್ರೀತಿಯ ನನ್ನ ನಾಯಿ ಜೊತೆಗಿದ್ದರೆ ನನ್ನನ್ನೂ ನಾ ಮರೆಯುತ್ತೇನೆ.ಹಾಗಾಗಿ ಪಕ್ಕಾ ಮಲೆನಾಡಿನ ಹುಡುಗ.ಅವಶ್ಯಕತೆ,ಅನಿವಾರ್ಯತೆಯ ಕಾರಣ ಬದುಕುತ್ತಿರುವುದು ಮೈಸೂರಿನಲ್ಲಿ.Chartered Accountancy ಯ ಭಾಗವಾದ Articleship ಅನ್ನು ಮಾಡುತ್ತಿದ್ದೇನೆ.ಬರೆಯುವುದು ಕೇವಲ ಹವ್ಯಾಸವಲ್ಲ ನನ್ನ ಜೀವನದ ಅವಿಭಾಜ್ಯ ಅಂಗ.ರಾಜಕೀಯವನ್ನ ನಾನು ಇಷ್ಟಪಡುತ್ತೇನೆ...ಆಸೆಯಿದೆ ಸಮಾಜಕ್ಕೆ ನನ್ನ ಕೈಲಾದಷ್ಟು ನೀಡಬೇಕೆಂಬುದು.. ಮತ್ತೇನು ನನ್ನ ಬಗ್ಗೆ ಹೇಳಿಕೊಳ್ಳುವಂತದ್ದಿಲ್ಲ

Sujith Kumar

ಹವ್ಯಾಸಿ ಬರಹಗಾರ.

Anoop Gunaga

ಪ್ರಸ್ತುತ ಕೋಟೇಶ್ವರದ ನಿವಾಸಿ. ಸಾಫ್ಟ್ ವೇರ್ ಇಂಜಿನಿಯರಿಂಗ್ ಉದ್ಯೋಗ. ಬರವಣಿಗೆ ಮನಸಿಗೆ ಮೆಚ್ಚು. ಯಕ್ಷಗಾನ, ಸಿನಿಮಾ, ಕನ್ನಡ ಸಾಹಿತ್ಯಾಧ್ಯಯನದ ಹುಚ್ಚು. ಪೆನ್ಸಿಲ್ ಸ್ಕೆಚ್-ಹವ್ಯಾಸ.
ಶಿವರಾಮ ಕಾರಂತರ ಕೃತಿಗಳಿಂದ ಪ್ರಭಾವಿತ, ಜಯಂತ ಕಾಯ್ಕಿಣಿಯವರ ಸಾಹಿತ್ಯದೆಡೆಗೆ ಮೋಹಿತ. ಮೌನರಾಗಕ್ಕೆ ಶಬ್ದಗಳ ಪೋಣಿಸುವ, ಕನಸುಗಳನ್ನು ಕಾವ್ಯವಾಗಿಸುವ, ಭಾವಗಳಿಗೆ ಬಣ್ಣ ಬಳಿಯುವ ಒಬ್ಬ ಸಂಭಾವಿತ

Rahul Hajare

ಬಾಹುಬಲಿ ತಾಂತ್ರಿಕ ವಿದ್ಯಾಲಯದಲ್ಲಿ ಎಲೆಕ್ಟ್ರಾನಿಕ್ಸ್ ಎಂಡ್ ಕಮ್ಯನಿಕೇಶನ್ ಇಂಜನೀಯರಿಂಗ್ ಪದವಿ
ಸದ್ಯಕ್ಕೆ ಮಂಗಳೂರಿನ ಬ್ಯಾಂಕ್'ನಲ್ಲಿ ಉದ್ಯೋಗ ಕತೆ,ಲೇಖನ, ಕವಿತೆ ಬರೆಯುವುದು ಪ್ರವೃತ್ತಿ. ಚೆಸ್,ಕ್ರಿಕೆಟ್ ಹವ್ಯಾಸ.

Sandesh H Naik

ಉಡುಪಿ ಜಿಲ್ಲೆ, ಕುಂದಾಪುರ ತಾಲೂಕಿನ ಹಕ್ಲಾಡಿ ಹುಟ್ಟೂರು. ಪ್ರಸ್ತುತ ಶಿಕ್ಷಕರಾಗಿ ಕಾರ್ಯನಿರ್ವಹಣೆ.  ಬರವಣಿಗೆ ಮೆಚ್ಚಿನ ಪ್ರವೃತ್ತಿಗಳಲ್ಲೊಂದು.

Gautam Hegde

ನಾಲ್ಕು ವರ್ಷದಿಂದ ಮಾಹಿತಿ ತಂತ್ರಜ್ಞಾನದಲ್ಲಿ ವೃತ್ತಿ, ಈಗ ಸ್ವಂತ ಕಂಪನಿಯೊಂದನ್ನು ನಡೆಸಬೇಕೆಂಬ ಹಂಬಲದಿಂದ ಸ್ಟಾರ್ಟ್ ಅಪ್ ನಡೆಸುತ್ತಿರುವ ನನಗೆ ಅತೀವ ಆಸಕ್ತಿ - ಸಾಹಿತ್ಯ - ಓದು - ಬರಹ. ಅದರ ಪ್ರತಿಬಿಂಬವೇ ಈ "ಆತ್ಮ ಸಂವೇದನಾ". ಕಾದಂಬರಿಗಳ ಲೋಕದಲ್ಲಿ ಮೊದಲ ಪ್ರಯತ್ನವಿದು. ನಿಮ್ಮೆಲ್ಲರ ಮನಸ್ಸು ಮುಟ್ಟಲಿ ಎಂದು ಪ್ರಯತ್ನದಲ್ಲಿ..

Rajesh Rao

ವೃತ್ತಿ: ವಿ ಎಲ್ ಎಸ್ ಐ ಇಂಜಿನಿಯರ್
ಪ್ರವೃತ್ತಿ: ಇತಿಹಾಸ/ಪ್ರಚಲಿತ ವಿದ್ಯಮಾನ, ಕಥೆ-ಕವನ ಬರವಣಿಗೆ

Mamatha Channappa

ಬದುಕೆಂಬ ರೈಲಿನಲ್ಲಿ ಜೀವನಾನುಭವದ ದೊಡ್ಡ ಮೂಟೆಯನ್ನು ಹೊತ್ತು ನಡೆದಿರುವ ಪುಟ್ಟ ಪಯಣಿಗಳು ನಾನು.. ಕಾಕತಾಳೀಯವೆಂಬಂತೆ ರೈಲ್ವೆ ಇಲಾಖೆಯಲ್ಲೆ ಕೆಲಸಮಾಡುತ್ತ ಬದುಕು ಎಸೆದ ಪಂಥಗಳನ್ನು ಎದುರಿಸುತ್ತ ಸಾಗಿದ್ದೇನೆ. ಆ ಹಾದಿಯಲ್ಲಿ ಜೊತೆಗಾರರಾಗಿ ಸಾಥ್ ಕೊಟ್ಟ ಹವ್ಯಾಸಗಳು ಗೀಳುಗಳಾಗಿ ಆಗಾಗ ಪದಗಳಾಗಿಯೋ, ಕುಶಲ ಕಲೆಯ ರೂಪದಲ್ಲೋ, ಕುಂಚದಿಂದ ಹೊಮ್ಮಿದ ಚಿತ್ರವಾಗಿಯೋ ಅನಾವರಣವಾಗುತ್ತವೆ - ನೋವು, ನಲಿವುಗಳೆಲ್ಲದರ ಅಭಿವ್ಯಕ್ತಿಯಾಗುತ್ತವೆ.ಇದಕ್ಕಿಂತ ಹೆಚ್ಚು ಹೇಳಲೇನೂ ಇಲ್ಲ ; ಇದ್ದರು ಅವು ಅಭಿವ್ಯಕ್ತವಾಗುವುದು ಬರಹದಲ್ಲಿ ಭಾವನೆಗಳಾಗಿ...

Vikram Joshi

ಬೆಳೆದಿದ್ದು ಕರ್ನಾಟಕದ ಕರಾವಳಿಯಲ್ಲಿ, ವೃತ್ತಿಯಲ್ಲಿ ಮೆಕ್ಯಾನಿಕಲ್ ಇಂಜಿನಿಯರ್. ಆಟೋಮೊಬೈಲ್ ಕಂಪನಿಯಲ್ಲಿ ಕೆಲಸ. ಮಿಷಿಗನ್ ಯುನಿವರ್ಸಿಟಿಯಿಂದ ಆಟೊಮೊಬೈಲ್ ಇಂಜಿನಿಯರಿಂಗ್ ನಲ್ಲಿ ಸ್ನಾತಕೋತ್ತರ ಪದವಿ. ಉದ್ಯೋಗ ಹಾಗೂ ಸಂಸಾರದಿಂದ ಬಿಡುವು ಸಿಕ್ಕಾಗ ಬರೆವಣಿಗೆ ಹವ್ಯಾಸ.

Dr. Abhijith A P C

ಲೇಖಕರಾದ ಡಾ. ಅಭಿಜಿತ್ ಎ.ಪಿ.ಸಿ ಹೋಮಿಯೋಪಥಿ ವೈದ್ಯಶಾಸ್ತ್ರವನ್ನೋದಿ ಮೈಸೂರಿನ ಜೆ.ಪಿ.ನಗರದಲ್ಲಿ ವೈದ್ಯ ಕೃಷಿ ಮಾಡುತ್ತಿದ್ದಾರೆ . ಆದರೂ ತಾವು ಹುಟ್ಟಿದ ನೆಲವನ್ನು ಮರೆಯಲಿಲ್ಲ . ಜೊತೆಜೊತೆಯಾಗಿ ತಮ್ಮ ಮನೆತನದ ಭೂಮಿಯಲ್ಲಿ ಅನ್ನದ ಕೃಷಿಯನ್ನೂ ಮಾಡುತ್ತಿ ದ್ದಾರೆ. ಈ ನಡುವೆ ಬೇಡವೆಂದರೂ ನಮ್ಮ ಸುತ್ತ ಹಾರುವ ಓಡಾಡುವ ಆ ಮೂಲಕ ಪ್ರಕೃತಿ ನೀತಿ ಪಾಠ ಹೇಳುವ ಖಗಮೃಗಗಳನ್ನು ನೋಡುತ್ತಾರೆ .

Sumana Mullunja

Trying hard to be myself on this Earth. Born and brought up at Puttur, Dakshina Kannada. Completed my B.Sc and pursuing M.Sc Physics from Kuvempu University – Distance Education, Shivamogga.

Readoo Staff

Tailored news content, just for you.

Lakshmisha J Hegade

ಮೈಸೂರು ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಓದಿರುವ ವೈದ್ಯ.ಹೆಮ್ಮೆಯ ಕನ್ನಡಿಗ.ದೇಶದ ಶ್ರೀಸಾಮಾನ್ಯ ಪ್ರಜೆಗಳಲ್ಲೊಬ್ಬ.ಕನ್ನಡ ಬ್ಲಾಗರ್.ಇವಿಷ್ಟೇ ನನ್ನ ಪ್ರವರ.ಹೆಚ್ಚು ತಿಳಿಸುವ ಅಗತ್ಯವಿಲ್ಲ.ನನ್ನ ನಿಲುವು,ಸಿದ್ಧಾಂತ,ಮನಸ್ಥಿತಿಯನ್ನು ತಿಳಿಯಲು ಇಲ್ಲಿ ಪ್ರಕಟವಾಗಿರುವ ನನ್ನ ಬರಹಗಳನ್ನು ಓದಿ.ಏನಾದರೂ ಗೊತ್ತಾಗಬಹುದು.

A. Ramachandra Bhat

ಕೇರಳ-ಕರ್ನಾಟದ ಗಡಿಯ ಊರು ಅಡ್ಯನಡ್ಕ, ನನ್ನ ಹುಟ್ಟೂರು. ಸ್ವಾತಂತ್ರ್ಯ ಪೂರ್ವದ ವ್ಯಕ್ತಿ ನಾನು. ನನ್ನ ತಂದೆಯವರಿಂದ ತೊಡಗಿ ಅಧ್ಯಾಪನವೇ ಜೀವನೋಪಾಯವಾಗಿದ್ದ ನನ್ನ ದೊಡ್ಡ ಕುಟುಂಬದಲ್ಲಿ ಕವಲು ದಾರಿ ಹಿಡಿದು ಆ ದಾರಿ ಬಿಟ್ಟು ಜೀವ ವಿಮಾ ನಿಗಮದಂತಹ ಸಂಸ್ಥೆಯಲ್ಲಿ ದುಡಿಯುವ ದಾರಿ ಕಂಡುಕೊಂಡ ಪ್ರಥಮ ಕುಟುಂಬ ಸದಸ್ಯ. ಅಡ್ಯನಡ್ಕ, ಕಾಸರಗೋಡು, ಹಾಗು ಪುತ್ತೂರಿನಲ್ಲಿ ಪ್ರಾಥಮಿಕ, ಮಾಧ್ಯಮಿಕ ಹಾಗೂ ಪದವಿ ವಿದ್ಯಾಭ್ಯಾಸ. ಎಲ್ಲರಂತೆ ನೌಕರಿಸೇರಿ ದುಡಿದು, ಈಗ ನಿವೃತ್ತನಾಗಿರುವವ. ಜೀವನದುದ್ದಕ್ಕೂ ಹೊಸ ಜಾಗ, ಜನ, ಘಟನೆ, ಚಟುವಟಿಕೆಗಳ ಬಗ್ಗೆ ಕುತೂಹಲ, ಅನುಭವಿಸುವ ಹಾಗೂ ದಾಖಲಿಸುವ ಹಂಬಲ ಇದ್ದವ. ಹಾಗಾಗಿ ಈಗ ಬಯಸಿದ್ದನ್ನು ಬರೆದು ಹಂಚಿಕೊಳ್ಳುವ ಹವ್ಯಾಸದವ. ಜೀವ ವಿಮಾ ನಿಗಮದಿಂದ ನಿವೃತ್ತಿಯ ನಂತರ ಈ ಹವ್ಯಾಸಕ್ಕೆ ದಾರಿ ಕಂಡುಕೊಂಡಿದ್ದೇನೆ. ಈಗ ಹುಟ್ಟೂರು ಬಿಟ್ಟು ವೃತ್ತಿಯಿಂದ ನಿವೃತ್ತಿಯಾದ ಉಡುಪಿಯಲ್ಲೇ ನನ್ನ ಕನಸುಗಳನ್ನು ನೇಯುತಿದ್ದೇನೆ.

Srinivas N Panchmukhi

ಮೂಲತಃ ಬಾಗಲಕೋಟೆಯವರಾದ ಶ್ರೀನಿವಾಸ ಪಂಚಮುಖಿ, ಕೈಗಾದಲ್ಲಿ  ತಾಂತ್ರಿಕ ಅಧಿಕಾರಿಯಾಗಿ   ಸೇವೆ ಸಲ್ಲಿಸುತ್ತಿದ್ದಾರೆ.  ಕ್ವಿಜ್ಜಿಂಗ್, ಪಕ್ಷಿ ವೀಕ್ಷಣೆ, ರಾಜಕೀಯ ವಿಶ್ಲೇಷಣೆ ಮತ್ತು  ಬರವಣಿಗೆ ಇವರ ಹವ್ಯಾಸಗಳು.

R D Hegade Aalmane

ರಘುಪತಿ ದೇವರು ಹೆಗಡೆ ( ಆರ್ ಡಿ ಹೆಗಡೆ ) ಹಿರಿಯ ಲೇಖಕರು ಹಾಗೂ ವಿಮರ್ಶಕರು. ವಯಸ್ಸು 68. ಸದ್ಯ ಶಿರಸಿ ತಾಲೂಕಿನ ಆಲ್ಮನೆಯಲ್ಲಿ ವಾಸ. ಸಂಸ್ಕೃತ ಹಾಗೂ ಆಂಗ್ಲ ಭಾಷಾ ಸಾಹಿತ್ಯ ದಲ್ಲಿ ಸ್ನಾತಕೋತ್ತರ ಪದವಿಯನ್ನು ಹಾಗೂ ಶಾಸನ ಶಾಸ್ತ್ರದಲ್ಲಿ ಡಿಪ್ಲೊಮಾವನ್ನೂ ಪಡೆದಿದ್ದಾರೆ. ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾಗಿ ನಿವೃತ್ತಿ ಹೊಂದಿರುವ ಇವರು ಈಗ ಕೃಷಿಯಲ್ಲಿ ನಿರತರಾಗಿದ್ದಾರೆ. ಇವರ ಸಾಹಿತ್ಯ ಕೃಷಿಯ ವ್ಯಾಪ್ತಿ ದೊಡ್ಡದು.ಭಾರತೀಯ ತತ್ವಶಾಸ್ತ್ರದ ಮೇಲೆ ಹಲವು ಕೃತಿಗಳನ್ನು ಹೊರತಂದಿದ್ದಾರೆ. ವೈಚಾರಿಕ ಲೇಖನಗಳ ಸಂಕಲನ, ಕಥಾಸಂಕಲನಗಳು, ಕಿರುಕಾದಂಬರಿ ಕೂಡ ಪ್ರಕಟವಾಗಿದೆ. ಉಪನಿಷತ್ತುಗಳ ಅರ್ಥಲೋಕ, ವ್ಯಕ್ತಿ ಚಿತ್ರಣ ಕುರಿತಾದ ಎರಡು ಕೃತಿಗಳು,ಅಂಕಣ ಬರಹಗಳ ಎರಡು ಕೃತಿಗಳು,ವಿಮರ್ಶೆಯ ಕುರಿತಾದ ಒಂದು ಕೃತಿ, ಭಗವದ್ಗೀತೆ ಇವರ ಕೆಲವು ಕೃತಿಗಳು. ಆಂಗ್ಲಭಾಷೆಯಲ್ಲಿಯೂ ಕೂಡ ಭಾರತೀಯ ತತ್ವಶಾಸ್ತ್ರದ ಕುರಿತಾದ ಕೃತಿಯನ್ನು ರಚಿಸಿದ್ದಾರೆ. ಇವರ ಲೇಖನಗಳು ನಾಡಿನ ಎಲ್ಲ ಪ್ರಮುಖ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಕಸ್ತೂರಿ ಮಾಸಪತ್ರಿಕೆಯು ತನ್ನಲ್ಲಿ ಪ್ರಕಟಿಸಿದ ಸಾರ್ವಕಾಲಿಕ 20 ಶ್ರೇಷ್ಠ ಲೇಖನಗಳನ್ನು ಮರುಪ್ರಕಟಿಸಿದಾಗ ಇವರ ಲೇಖನವೂ ಇದ್ದದ್ದು ಇವರ ಹೆಗ್ಗಳಿಕೆ. ನೂರಾರು ಲೇಖಕರ ಪುಸ್ತಕಗಳಿಗೆ ಮುನ್ನುಡಿಯನ್ನೂ, ವಿಮರ್ಶೆಯನ್ನೂ ಬರೆದಿರುತ್ತಾರೆ. ಸದ್ಯ ಶಿರಸಿಯ ದಿನಪತ್ರಿಕೆ “ಲೋಕಧ್ವನಿ” ಯಲ್ಲಿ ಪ್ರತಿವಾರ “ಈ ಹೊತ್ತಿಗೆ” ಅಂಕಣವನ್ನು ಬರೆಯುತ್ತಿದ್ದು ಸಾಕಷ್ಟು ಜನಪ್ರಿಯವಾಗಿದೆ. ಇವರ ಇತ್ತೀಚಿನ ಕೃತಿ “ಜೆನ್ ಮಹಾಯಾನ” ನವಕರ್ನಾಟಕ ಪ್ರಕಾಶನದಿಂದ ಪ್ರಕಟವಾಗಿದ್ದು ಈಗಾಗಲೇ 2 ಮರುಮುದ್ರಣಗಳನ್ನು ಕಂಡಿದೆ.

Harish mambady

ಕಳೆದ ಹದಿನಾರು ವರ್ಷಗಳಿಂದ ಹೊಸ ದಿಗಂತ, ಉದಯವಾಣಿ, ತರಂಗ, ಕನ್ನಡಪ್ರಭ ಹಾಗೂ ವಿಜಯವಾಣಿಯಲ್ಲಿ ಉಪಸಂಪಾದಕ, ವರದಿಗಾರ ಹಾಗೂ ಮುಖ್ಯ ಉಪಸಂಪಾದಕನ ಜವಾಬ್ದಾರಿ ನಿಭಾಯಿಸಿರುವ ಹರೀಶ ಮಾಂಬಾಡಿ ಸದ್ಯ ಫ್ರೀಲ್ಯಾನ್ಸ್ ಪತ್ರಕರ್ತರಾಗಿ ದುಡಿಯುತ್ತಿದ್ದಾರೆ. ಸಮಕಾಲೀನ ವಿದ್ಯಮಾನ,  ಸಿನಿಮಾ ಕುರಿತ ಲೇಖನಗಳು, ಬರೆಹಗಳು ವಿವಿಧ ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ.  ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ.ರೋಡ್ ನಿವಾಸಿ.

Santoshkumar Mehandale

ಅಂಕಣಕಾರರಾಗಿರುವ ಸಂತೋಷ್ ಕುಮಾರ್ ಮೆಹಂದಲೆ, ಮೂಲತಃ ಉತ್ತರಕನ್ನಡ ಜಿಲ್ಲೆಯವರಾಗಿದ್ದು, ಪ್ರಸ್ತುತ ಕೈಗಾದಲ್ಲಿ ಉದ್ಯೋಗಿಯಾಗಿದ್ದಾರೆ. ಇದುವರೆಗೆ ೮ ಕಾದಂಬರಿಗಳು, ೩ ಕಥಾ ಸಂಕಲನಗಳೂ ಸೆರಿದಂತೆ ಹಲವಾರು ಪುಸ್ತಕಗಳನ್ನು ಬರೆದಿದ್ದು, ಮಾಧ್ಯಮ ಅಕಾಡೆಮಿ ಪ್ರಶಸ್ತಿ ಮುಂತಾದ ಪ್ರಶಸ್ತಿಗಳಿಗೂ ಭಾಜನರಾಗಿದ್ದಾರೆ.

Bharatesha Alasandemajalu

ನಾನೊಬ್ಬ ಹೆಮ್ಮೆಯ ಹ್ಯಾಮ್ - VU3NNV ಕರೆ ಸಂಕೇತ , ರೇಡಿಯೋ ಕೇಳೋದು , ಊರೂರು ಸುತ್ತೋದು , ಬೆಟ್ಟ ಹತ್ತುವುದು , ಚಿತ್ರ ಸೆರೆಹಿಡಿಯುವುದು, ಪುಟಾಣಿ ಮಕ್ಕಳೊಂದಿಗೆ ಆಡೋದು, ಪ್ರಾಯದವರೊಂದಿಗೆ ಹರಟೋದು, ಮತ್ತೆ ತಲೆ ತಿನ್ನೋದು ಇವೆಲ್ಲ ಅಂದ್ರೆ ತುಂಬಾ ಇಷ್ಟ... ಕುಡ್ಲದ ಪುತ್ತೂರಿನವ , ನನ್ನ ತುಳುನಾಡು, ನನ್ನ ಕನ್ನಡ , ನನ್ನ ಭಾರತವನ್ನು ಒಂದಿಚು ಬಿಟ್ಟು ಕೊಡುವವನಲ್ಲ, ನಾಡು , ನುಡಿ , ದೇಶದ ಬಗೆಗೆ ಗರ್ವ , ಅಹಂಕಾರ , ಸ್ವಾರ್ಥಿ ನಾನು . ಯಾಕೋ ಓದಿದ ತಪ್ಪಿಗೆ ದೂರದ ಮಸ್ಕಟ್ ನಲ್ಲಿ ಯಾಂತ್ರಿಕ ತಂತ್ರಜ್ಞನಾಗಿ ನೌಕರಿ.... ಒಟ್ಟಾರೆ ಪಿರಿಪಿರಿ ಜನ !!

Raviteja Shastri

ಗೌರಿಬಿದನೂರು ಸ್ವಂತ ಊರು. ಈಗ ಬೆಂಗಳೂರಿನಲ್ಲಿ ವಾಸ. ಅಕೌಂಟೆಂಟ್ ಆಗಿ ಖಾಸಗಿ ಕಂಪನಿಯಲ್ಲಿ ಕೆಲಸ. ಓದು ಬರವಣಗೆ, ದೇಶಸೇವೆ, ಸಮಾಜ ಸೇವೆ ನನ್ನ ಹವ್ಯಾಸಗಳು. ಉತ್ತಿಷ್ಠ ಭಾರತ ಎಂಬ ಸಂಘಟನೆಯ ಸಕ್ರಿಯ ಕಾರ್ಯಕರ್ತ.

Manjunath Madhyasta

ಹೆಸರು ಮಂಜುನಾಥ್ ಮಧ್ಯಸ್ಥ. ಓದಿದ್ದು ವಿಜ್ಞಾನ. ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ವೃತ್ತಿ. ಸಾಹಿತ್ಯ ಹಾಗೂ ಅಧ್ಯಾತ್ಮದಲ್ಲಿ ಬಹಳ ಆಸಕ್ತಿ. ಬರೆಯೋದು ನೆಚ್ಚಿನ ಹವ್ಯಾಸ. ಭೌತಶಾಸ್ತ್ರ ಹಾಗೂ ಖಗೋಳ ಶಾಸ್ತ್ರ ನನ್ನ ನೆಚ್ಚಿನ ವಿಷಯಗಳು.

Dattaraj D

ದತ್ತರಾಜ್ ಹುಟ್ಟಿದ್ದು 1986, ಧಾರವಾಡ ಜಿಲ್ಲೆಯ ಕುಗ್ರಾಮವೊಂದರಲ್ಲಿ. ಬೆಳೆದದ್ದು ಆಂಧ್ರಪ್ರದೇಶ ತಮಿಳು ನಾಡು ಮಹಾರಾಷ್ಟ್ರ ಮುಂತಾದೆಡೆ. ಶಾಲಾ ಕಾಲೇಜುಗಳಿಗೆ ಹೋಗಿ ವಿದ್ಯಾಭ್ಯಾಸ ಮಾಡಿಲ್ಲ. ಮೌಖಿಕ ಗುರುಶಿಷ್ಯ ಪರಂಪರೆಯಲ್ಲಿ ಋಗ್ವೇದವನ್ನು ಸಂಪೂರ್ಣವಾಗಿ ಅಧ್ಯಯನ ಮಾಡಿದ್ದಾರೆ. ಬೀದರ್ ಜಿಲ್ಲೆಯ ಕೇಂದ್ರ ಸರ್ಕಾರದ ಅನುದಾನಿತ ಗುರುಕುಲದಲ್ಲಿ ಋಗ್ವೇದ ಅದ್ಯಾಪಕರಾಗಿ ಕೆಲಸ ಮಾಡುತ್ತಿದ್ದರು. ವೈಯಕ್ತಿಕ ಕಾರಣಗಳಿಂದಾಗಿ ಉದ್ಯೋಗ ತ್ಯಜಿಸಿ ಕಳೆದ ನಾಲ್ಕೈದು ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಗೆಳೆಯರ ಜೊತೆ ಸೇರಿ ಕಟ್ಟಡ ನಿರ್ಮಾಣ ಸಂಸ್ಥೆ ನಡೆಸುತ್ತಾರೆ. ಕನ್ನಡ, ತೆಲುಗು, ಹಿಂದೀ ಮತ್ತು ಸಂಸ್ಕೃತ ಭಾಷೆಗಳಲ್ಲಿ ಬರವಣಿಗೆ ಮಾಡುತ್ತಾರೆ.

ಶ್ರೀ ತಲಗೇರಿ

ಸದ್ಯಕ್ಕೆ ಬೆಂಗಳೂರಿನಲ್ಲಿ ವಾಸ,ಆಗಾಗ ಲೇಖನಿ,ಕುಂಚಗಳ ಸಹವಾಸ..ಬದುಕಿನ ಬಣ್ಣಗಳಲ್ಲಿ ಪ್ರೀತಿಯ ಚಿತ್ರ ಬಿಡಿಸಿ ಖುಷಿಪಡುತ್ತ,ಶಬ್ದಗಳಿಗೆ ಜೀವ ಕೊಡುವ ಪ್ರಯತ್ನದಲ್ಲಿ ಪುಟ್ಟ ಪುಟ್ಟ ಹೆಜ್ಜೆ ಇಡುತ್ತಿರುವ ಕನಸು ಕಂಗಳ ಹುಡುಗ...

Shylaja Kekanaje

ಶೈಲಜಾ ಕೇಕಣಾಜೆ ಮೂಲತಃ ದಕ್ಷಿಣ ಕನ್ನಡದ ವಿಟ್ಲದವರು. ಬಿ .ಇ. ಪದವೀಧರೆಯಾಗಿದ್ದು ಸದ್ಯ ಬೆಂಗಳೂರು ವಾಸಿ. ಲೇಖನ, ಕವನಗಳ ರಚನೆಯಲ್ಲಿ ಹವ್ಯಾಸಿ. ಅದರಲ್ಲೂ ಛಂದೋಬದ್ದ ಕವನಗಳನ್ನು ರಚಿಸುವ ತುಡಿತ. ಮಕ್ಕಳ ಪಾಕ್ಷಿಕ ಬಾಲಮಂಗಳದಲ್ಲೊಂದು ಸರಣಿ ಲೇಖನ ಯಶಸ್ವಿಯಾಗಿ ಮೂಡಿ ಬರುತ್ತಾ ಇದೆ.

Nagesh kumar

ನಾಗೇಶ್ ಕುಮಾರ್ ಸಿ ಎಸ್ ಹುಟ್ಟಾ ಬೆಂಗಳೂರಿನವನಾಗಿದ್ದು, ಸಿವಿಲ್ ಎಂಜಿನಿಯರಿಂಗ್ ಸ್ನಾತಕೋತ್ತರ ಪದವೀಧರ. ಈಗ ಚೆನ್ನೈ ನಗರದಲ್ಲಿ ಬಹುರಾಷ್ಟ್ರೀಯ ಸಂಸ್ಥೆಯೊಂದರಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದಾರೆ, ಕುಟುಂಬ ಸಮೇತ ತಮಿಳು ನಾಡಿನ ಕನ್ನಡ ಪರ ಸಂಸ್ಥೆಗಳ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.

Jagath Bhat

ಜಗತ್ ಭಟ್ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನವರು. ಯಕ್ಷಗಾನ, ಛಾಯಾಗ್ರಹಣ ಮತ್ತು ಬರವಣಿಗೆ ಇವರ ಹವ್ಯಾಸ

Deepthi Delampady

Currently studying Information Science and Engineering (6th semester) at SJCE, Mysore.

Saroja Prabhakar

‘ಉತ್ಥಾನ ‘ಪತ್ರಿಕೆಯ ಕಾರ್ಯಕರ್ತೆ. ಓದು, ಬರವಣಿಗೆ, ಸಂಗೀತ ಹವ್ಯಾಸ.

Kavana V Vasishta

An Akashavani artist, loves reading novels and have published a book "Anthargami"

Dattathri M N

ಪ್ರಸ್ತುತ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಡಿಸೈನರ್ ಆಗಿ ಉದ್ಯೋಗಮಾಡುತ್ತಿರುವ ದತ್ತಾತ್ರಿ ಎಂ. ಎನ್ ಮೂಲತ: ತೀರ್ಥಹಳ್ಳಿ ತಾಲೂಕಿನವರು, ಯಾವುದೇ ವಿಷಯವನ್ನೂ ವ್ಯಂಗ್ಯ ದೃಷ್ಠಿ ಕೋನದಲ್ಲಿ ನೋಡುವುದು... ಚಿಕ್ಕಂದಿನಿಂದ ಬೆಳೆದು ಬಂದ ಹವ್ಯಾಸ

Manjunath Hegde

ಉತ್ತರ ಕನ್ನಡ ಜಿಲ್ಲೆಯ ಶಿರಸಿ ಸಮೀಪದ ಹಳ್ಳಿ ಇವರ ಮೂಲ.. ಉಡುಪಿಯಲ್ಲಿ MSc ಮಾಡಿ ಒಂದು ವರ್ಷ ಲೆಕ್ಚರರ್ ಆಗಿ ಕೆಲಸ ಮಾಡಿ ಈಗ NITK ಸುರತ್ಕಲ್’ನಲ್ಲಿ PhD ಮಾಡುತ್ತಿದ್ದಾರೆ... ಓದಿದ್ದು ಕಂಪ್ಯೂಟರ್ ಆದರೂ ಸಾಹಿತ್ಯದಲ್ಲಿ ಆಸಕ್ತಿ.. ಬರೆಯುವುದು ಹವ್ಯಾಸ.. ವಿಜ್ಞಾನದ ಬರಹಗಳು, ಕಥೆ ಮತ್ತು ಪ್ರಚಲಿತ ವಿದ್ಯಮಾನಗಳ ಬಗ್ಗೆ ಬರೆಯುವ ಆಸಕ್ತಿ ಹೆಚ್ಚು..

Vinaykumar Sajjanar

Engineer by profession and Author of two poem collection books named " Enna Todalu Nudigalu " and " Bhaavasharadhi" .

Udayabhaskar Sullia

ಮಡಿಕೇರಿ ತಾಲೂಕಿನ ಪೆರಾಜೆಯಲ್ಲಿ ಜನಿಸಿದ್ದು ಪ್ರಸ್ತುತ ಸುಳ್ಯದಲ್ಲಿ ವಾಸ್ತವ್ಯ. ಜೀವನ ನಿರ್ವಹಣೆಗಾಗಿ ಸ್ವ ಉದ್ಯೋಗ ಹೊಂದಿರುತ್ತೇನೆ. ದೇಶಭಕ್ತಿಯ ಭಾಷಣ, ಅಧ್ಯಾತ್ಮಿಕ ಪ್ರವಚನಗಳನ್ನು ಕೇಳುವುದು, ಹಳೆಯ ಸಿನೆಮಾ ಹಾಡು, ಭಾವಗೀತೆ, ಭಕ್ತಿಗೀತೆಗಳನ್ನು ಆಲಿಸುವುದು, ಸಮಾಜಸೇವೆ, ಸದ್ವಿಚಾರ ಪ್ರಸಾರ... ಇವು ನನ್ನ ಆಸಕ್ತಿಯ ಕ್ಷೇತ್ರಗಳು. ಭಜನೆ ಹಾಡುವುದು, ಕವನ ರಚನೆ, ಸಾಮಾಜಿಕ-ದೇಶಭಕ್ತಿ- ಸಂಸ್ಕೃತಿಗಳ ಕುರಿತಾದ ಚಿಕ್ಕಪುಟ್ಟ ಲೇಖನಗಳನ್ನು ಬರೆಯುವುದು ಹಾಗೂ ಬೌದ್ಧಿಕ ಮಟ್ಟವನ್ನು ಹೆಚ್ಚಿಸುವ ಸದ್ಗ್ರಂಥಗಳ ಅಧ್ಯಯನ.. ಇವು ನನ್ನ ಹವ್ಯಾಸ.

Manu Vaidya

Hails from Sirsi and presently working at Snehakunja Trust, Ksarakod, Honnavar.

Hobby: Reading books, Writing poem, story, and articles. Writing a column named 'Mana-Dani’ in “Sirsi siri” news paper.

Ishwara Bhat

ವೃತ್ತಿ : ಬೆಂಗಳೂರಿನಲ್ಲಿ ಖಾಸಗಿ ಕಂಪೆನಿಯಲ್ಲಿ ಉದ್ಯೋಗ,
ಹವ್ಯಾಸ : ಓದುವುದು, ಇಂಟರ್ನೆಟ್, ಪ್ರವಾಸ ಇಷ್ಟು.
ಒಂದು ಕವನಸಂಕಲನ ಪ್ರಕಟವಾಗಿದೆ.

Praven Kumar Mavinakadu

ಮೂಲತಃ ಪರಿಸರಪ್ರೇಮಿ.ಹವ್ಯಾಸೀ ಬರಹಗಾರ.
ನೈಸರ್ಗಿಕ ಸಂಪನ್ಮೂಲಗಳನ್ನು ಉಳಿಸಿಕೊಳ್ಳುವ ಮಹತ್ವಾಕಾಂಕ್ಷೆಯಿಂದ ಪರಿಸರ ಸ್ನೇಹಿ ಸೋಲಾರ್ ಅಡುಗೆ ಉಪಕರಣಗಳ ತಂತ್ರಜ್ಞಾನ ಅಭಿವೃದ್ಧಿಯಲ್ಲಿ ತೊಡಗಿಕೊಂಡಿದ್ದು ಮುಂದೆ ಅವುಗಳನ್ನು ದೇಶದ ಮನೆಮನೆಗೂ ಮುಟ್ಟಿಸಬೇಕೆನ್ನುವ ಕನಸಿದೆ.

ಶ್ರೀಕಲಾ ಹೆಗಡೆ ಕಂಬ್ಳಿಸರ

ಹುಟ್ಟಿದ್ದು, ಬೆಳೆದದ್ದು ಸಿರಸಿಯ ಪುಟ್ಟ ಹಳ್ಳಿಯೊಂದರಲ್ಲಿ.
ಓದಿದ್ದು ವಾಣಿಜ್ಯಶಾಸ್ತ್ರ. ಐದು ವರ್ಷಗಳು ಬೆಂಗಳೂರಿನ ಬಹುರಾಷ್ಟ್ರೀಯ ಕಂಪನಿಯೊಂದರಲ್ಲಿ ಕೆಲಸ ಮಾಡಿದ ಅನುಭವ. ಈಗ ಗೃಹಿಣಿಯಾಗಿದ್ದು, ಬರವಣಿಗೆ ಹವ್ಯಾಸ.

Gurukiran

ನಿರುಪದ್ರವಿ ಸಾಧು ಪ್ರಾಣಿ. ಹುಟ್ಟಿದ್ದು ಹವ್ಯಕ ಬ್ರಾಹ್ಮಣ ಕುಟುಂಬದಲ್ಲಿ. ಐದಡಿಯ ಮೇಲೆ ಆರಿಂಚು ಇದ್ದೇನೆ. ದೇಹದ ತೂಕಕ್ಕಿಂತ ಮಾತಿನ ತೂಕ ಹೆಚ್ಚು . ಗೋಧಿ ಬಣ್ಣ ಸಾಧಾರಣ ಮೈಕಟ್ಟು . ಸದ್ಯಕ್ಕೆ ಬರವಣಿಗೆ ಹವ್ಯಾಸ , ಮುಂದೆ ಗೊತ್ತಿಲ್ಲ.

Adarsh B Vasista

I am an engineer by training, a researcher by profession and a writer by passion. Hailing from Hassan, I, presently is a PhD student at Indian Institute of Science Education ad Research (IISER) Pune.

Rohit Padaki

ಕನ್ನಡದ ಯುವ ಲೇಖಕರಲ್ಲಿ ಒಬ್ಬರು. ದೃಶ್ಯ ಮಾಧ್ಯಮದಲ್ಲಿ ಸಾಕಷ್ಟು ಕಾರ್ಯ ನಿರ್ವಹಿಸಿ ಬಿಗ್ ಬಾಸ್, ವೀಕೆಂಡ್ ವಿತ್ ರಮೇಶ್ ಎಂಬ ಶೋಗಳಿಗೆ ಇವರ ಬರವಣಿಗೆಯಿದೆ. ಇತ್ತೀಚೆಗೆ ಬಿಡುಗಡೆಯಾದ ಆಟಗಾರ ಚಿತ್ರಕ್ಕೆ ಸಂಭಾಷಣೆ ಸಾಹಿತ್ಯ ಇವರದೇ ಆಗಿತ್ತು. ಮೊನಚಾದ ಪದಗಳಿಗೆ ಹೆಸರುವಾಸಿಯಾಗಿರುವ ಇವರ ಬರಹ ಪ್ರಭಾವಶಾಲಿ, ಹಾಗು ಹೊಸತನ ತುಂಬಿರುತ್ತದೆ.

Abhilash T B

Software engineer by profession. He is from Tipatoor . Writing story is his hobby.

Sandeep Hegde

ಭಟ್ಕಳ ತಾಲ್ಲೂಕಿನ ಕೆರೆಹಿತ್ಲು ಗ್ರಾಮದವನಾಗಿದ್ದು, ಮೊದಲ ಹಂತದ ಶಿಕ್ಷಣವನ್ನು ಭಟ್ಕಳ ಮತ್ತು ಬೈಂದೂರಿನಲ್ಲಿ ಮುಗಿಸಿ, ಎಂಜಿನಿಯರಿಂಗ್ ಪದವಿಯನ್ನು ಮೈಸೂರಿನ ಜಯಚಾಮರಾಜೇಂದ್ರ ಕಾಲೇಜಿನಲ್ಲಿ ಪಡೆದು, ಪ್ರಸ್ತುತ M.N.C ಕಂಪನಿಯೊಂದರಲ್ಲಿ ಉದ್ಯೋಗದಲ್ಲಿದ್ದೇನೆ. ಚಿಕ್ಕಂದಿನಿಂದಲೂ ಜತನದಿಂದ ಉಳಿಸಿಕೊಂಡು ಬಂದ ಅಭ್ಯಾಸವೆಂದರೆ ಓದುವುದು ಮತ್ತು ಬರೆಯುವುದು. ಅರೆಮಲೆನಾಡಿನ ಜನಜೀವನ, ಭಾಷೆ, ಅಭ್ಯಾಸ, ಕೃಷಿ, ಪ್ರೇಮ, ಕಾಮ, ಹಾಸ್ಯ, ಮಣ್ಣು, ನಿಸರ್ಗ ಸೌಂದರ್ಯದ ಕುರಿತಾಗಿ ಹೇಳಲು ಹಾಗೂ ಬರೆಯಲು ಯಾವಾಗಲೂ ಸಿದ್ಧ. ಹತ್ತು ಹಲವು ವಿಚಾರಧಾರೆಗಳ, ವ್ಯಕ್ತಿಗಳ ಸೈದ್ಧಾಂತಿಕ ಧೋರಣೆಗಳನ್ನು ಗಮನಿಸಿ, ಕೊನೆಗೂ ಯಾವುದಕ್ಕೂ ಪಕ್ಕಾಗದೇ ಇರುವ ವ್ಯಕ್ತಿ. ಹಲವಾರು ಕಥೆಗಳು ಮಯೂರ, ತರಂಗ ಮುಂತಾದ ಪತ್ರಿಕೆಗಳಲ್ಲಿ ಪ್ರಕಟವಾಗಿದೆ.

Anand Rc

ಹವ್ಯಾಸಿ ಬರಹಗಾರ,ಎಂ,ಸಿ,ಎ ಓದಿ,ಪ್ರಸ್ತುತ ಗದಗ ಜಿಲ್ಲೆಯಲ್ಲಿ ಸರಕಾರಿ ಯೋಜನೆಗಳಿಗೆ
ಸಲಹೆಗಾರರ ವೃತ್ತಿ.ಕಂಪ್ಯೂಟರ್,ಮಾಹಿತಿ ತಂತ್ರಜ್ಞಾನ ಮತ್ತು ಪುಸ್ತಕಗಳ ಆಸಕ್ತಿ ಬರೆಯುವದನ್ನು
ಕಲಿಸಿದ್ದು,Aarsi.org ಎಂಬ ಸ್ವಂತ ವೆಬ್ಸೈಟ್ ಹೊಂದಿದ್ದಾರೆ.

Sachin anchinal

Writer by Love, Politician by Passion, Engineer by Profession. basically from Vijayapur (Bijapur). and loves to travel, read books and cricket .

Chaithanya Kudinalli

ಓದಿದ್ದು ಬಿಎಸ್ಸಿ, ಪ್ರಸ್ತುತ ಪತ್ರಿಕೋದ್ಯಮ ವಿದ್ಯಾರ್ಥಿ. ಹಾಗಾಗಿ ಓದು, ಬರವಣಿಗೆ, ತಿರುಗಾಟ ಮತ್ತು ಫೋಟೊಗ್ರಫಿ ಹವ್ಯಾಸ ಮಾತ್ರವಲ್ಲ ಕಾಯಕ ಕೂಡ. ರಾಜಕಾರಣ, ಇತಿಹಾಸ, ಪ್ರಚಲಿತ ವಿದ್ಯಮಾನಗಳು, ಕಥೆ, ಕಾದಂಬರಿ, ಸಿನಿಮಾ ಇವು ಆಸಕ್ತಿದಾಯಕ ವಿಷಯಗಳು.

Ashwin Amin Bantwal

Self Employed & Journalist

ಶಂ.ನಾ. ಖಂಡಿಗೆ

ಕನ್ನಡದಲ್ಲಿ ಎಂ.ಎ ಬಳಿಕ ಹೊಸದಿಗಂತ ಪತ್ರಿಕೆಯ ಸಾಪ್ತಾಹಿಕ ಪುರವಣಿಯ ಸಂಪಾದಕರಾಗಿ ಐದು ವರ್ಷ ಕಾರ್ಯನಿರ್ವಹಿಸಿದ ಬಳಿಕ ಮರಳಿ ಮಣ್ಣಿಗೆ ಎನ್ನುವಂತೆ ಪೂರ್ಣ ಪ್ರಮಾಣದಲ್ಲಿ ಕೃಷಿಯತ್ತ ಒಲವು. ಜೊತೆಗೇ ಹೊಸದಿಗಂತ ಪತ್ರಿಕೆಯಲ್ಲಿ ಹತ್ತು ವರ್ಷಗಳಿಂದ “ಕೃಷಿಯೊಸಗೆ” ಎಂಬ ಅಂಕಣವನ್ನು ಬರೆಯುತ್ತಿದ್ದಾರೆ. ಮಕ್ಕಳ ಕಥೆ ಕವನ – ಪುಸ್ತಕ ವಿಮರ್ಶೆ – ವ್ಯಕ್ತಿತ್ವ ವಿಕಸನ ಬರಹ ಹೀಗೆ ಬರಹದ ಒಲವು. ಪ್ರಸ್ತುತ, ಪ್ರತಿಷ್ಟಿತ ಕ್ಯಾಂಪ್ಕೋದ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Anoop Vittal

ಪ್ರವೃತ್ತ ವಿದ್ಯಮಾನಗಳ ಚಿಂತಕ, ಲೇಖಕ. ಯೋಗ ತಜ್ಞ.

Vrushanka Bhat

Editor at Vikrama Kannada Weekly

Harikiran H

ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಕುಂಬ್ಳೆ ಎಂಬ ಗ್ರಾಮದಲ್ಲಿ ವಾಸವಾಗಿರುವ ಹರಿಕಿರಣ್. ಮಂಗಳೂರಿನಲ್ಲಿ ಫಾರ್ಮಸ್ಯೂಟಿಕಲ್ ಕೆಮಿಸ್ಟ್ರಿ
ಎಂಬ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದು ಇದೀಗ ಕಾಸರಗೋಡಿನಲ್ಲಿ ಅಲೋಪಥಿಕ್ ಔಷಧಿಗಳ ಮಾರಾಟ ಮಳಿಗೆ ನಡೆಸುತ್ತಿದ್ದಾರೆ. ಕನ್ನಡ ಕಥೆ, ಸಿನಿಮಾ, ಸಂಗೀತ ಮತ್ತು ಸಾಹಿತ್ಯದ ಇತರ ಪ್ರಕಾರಗಳಲ್ಲಿ ಅಭಿರುಚಿಯನ್ನು ಹೊಂದಿರುತ್ತಾರೆ. ಕೆಲವೊಂದು ಸಣ್ಣ ಕಥೆಗಳನ್ನು ಕೂಡ ಬರೆದಿದ್ದಾರೆ

ವೇದಾ ಅಠವಳೆ

ಪರಿಚಯ: ನಾನೊಬ್ಬ‌ ಮಧ್ಯಮವರ್ಗದ‌ ಮಹಿಳೆ. ಖಾಸಗಿ ಶಾಲೆಯಲ್ಲಿ ಅಧ್ಯಾಪಕಿ. ಏನಾದ್ರೂ ಹೊಸದನ್ನು ಕಲಿಯುವುದೆಂದರೆ ನನಗಿಷ್ಟ‌. ಜನರ‌ ಅಪ್ರಾಮಾಣಿಕತೆ , ಕೃತಕತೆ ಕಂಡರೆ ಕಷ್ಟ‌. ನನ್ನ‌ ಬ್ಲಾಗ್ ವಿಳಾಸ‌ antardrushti.blogspot.in
ಹುಟ್ಟೂರು : ಮಾಳ‌ ಗ್ರಾಮ‌ , ಉಡುಪಿ ಜಿಲ್ಲೆಯ‌ ಕಾರ್ಕಳ‌ ತಾಲೂಕು
ವಾಸವಾಗಿರುವ ಊರು: ಬೆಂಗಳೂರು

Vinod Krishna

ಸಾಫ್ಟ್’ವೇರ್ ಕಂಪೆನಿಯಲ್ಲಿ ಉದ್ಯೋಗದ ನಡುವಿನ ಬಿಡುವು..ಆ ಸಮಯದಿ ಬರವಣಿಗೆಯತ್ತ ಹೆಚ್ಚು ಒಲವು..
ತನ್ನದೇ ಶೈಲಿಯಲ್ಲಿ ಗೀಜಿ ರಚಿಸಲ್ಪಟ್ಟ ಕಥೆಗಳು ಹಲವು..ಅವುಗಳಲ್ಲಿ ಕಿರುಚಿತ್ರವಾದವುಗಳು ಕೆಲವು..
ಮಿಕ್ಕಂತೆ ಒಳ್ಳೆಯ ಪುಸ್ತಕಗಳನ್ನು ಓದುವುದು,ಸಿನೆಮಾ ವೀಕ್ಷಣೆ,ಹಾಡನ್ನು ಕೇಳುವುದು ಇತರ ಹವ್ಯಾಸಗಳು..
ದೇವರ ಸ್ವಂತ ನಾಡಿನ ಕಾಸರಗೋಡು ಜಿಲ್ಲೆಯ ಕುಂಟಂಗೇರಡ್ಕ ಎಂಬ ಪುಟ್ಟ ಊರು ಹುಟ್ಟೂರು.

Usha Jogalekar

ಉತ್ತರ ಕರ್ನಾಟಕದ ಗದಗಿನಲ್ಲಿ ಬೆಳೆದಿದ್ದು. ಸದ್ಯಕ್ಕೆ ಪುಣೆಯಲ್ಲಿ ವಾಸ. ಕಂಪ್ಯೂಟರ್ ಎಂಜಿನಿಯರಿಂಗ್ ಮಾಡಿ ಕಾಲೇಜೊಂದರಲ್ಲಿ ಅಸಿಸ್ಟಂಟ್ ಪ್ರೊಫೆಸರ್. ಓದು, ಭರತನಾಟ್ಯ, ಪ್ರವಾಸ ಆಸಕ್ತಿಯ ವಿಷಯಗಳು. ಚಿಕ್ಕ ಕಥೆ, ಲೇಖನ ಬರೆಯುವ ಹವ್ಯಾಸ.

Chakravarthy Sulibele

ನಾಡಿನ ಖ್ಯಾತ ಚಿಂತಕರೂ, ವಾಗ್ಮಿಗಳೂ, ಬರಹಗಾರರೂ ಆಗಿರುವ ಶ್ರೀ ಚಕ್ರವರ್ತಿ ಸೂಲಿಬೆಲೆಯವರು, ನಿತ್ಯ ನಿರಂತರವಾಗಿ ದೇಶದ ಜನರಲ್ಲಿ ರಾಷ್ಟ್ರ ಭಕ್ತಿಯನ್ನು ಉಕ್ಕಿಸುತ್ತಾ ದೇಶಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.

Prabhakar Tamragouri

ಫ್ರೀಲಾನ್ಸ್ ಬರಹಗಾರರಾಗಿದ್ದು ಗೋಕರ್ಣ ನಿವಾಸಿಯಾಗಿದ್ದಾರೆ. ಈವರೆಗೆ 4 ಕಾದಂಬರಿ , 4 ಕಥಾ ಸಂಕಲನ ,2 ಕವನ ಸಂಕಲನ ಒಟ್ಟು 10 ಪುಸ್ತಕಗಳು ಪ್ರಕಟವಾಗಿವೆ .

Shivaprasad Surya

ದಕ್ಷಿಣಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಸುರ್ಯದವರಾದ ಶಿವಪ್ರಸಾದ್ 1990ರಲ್ಲಿ ಜನಿಸಿದರು. ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಶಿಕ್ಷಣ ಪೂರೈಸಿದ ನಂತರ ಇದೀಗ ಉದ್ಯೋಗ ನಿಮಿತ್ತ ಬೆಳಗಾವಿಯ ಅಥಣಿಯಲ್ಲಿ ನೆಲೆಸಿದ್ದಾರೆ. ಪ್ರಸ್ತುತ ವಿಧ್ಯಮಾನಗಳ ವಿಶ್ಲೇಷಣೆಯ ಜೊತೆಗೆ ಸೃಜನಶೀಲ ಸಾಹಿತ್ಯದಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಕತೆ, ಕವನ, ಹಾಸ್ಯಪ್ರಬಂಧ ಲೇಖಕರ ಆಸಕ್ತಿಯ ಕ್ಷೇತ್ರಗಳು. ಚಾರಣ ಮೆಚ್ಚಿನ ಹವ್ಯಾಸಗಳಲ್ಲಿ ಒಂದು.

vinutha perla

ವೃತ್ತಿ ಪತ್ರ್ರಿಕೋದ್ಯಮ. ಪ್ರವೃತ್ತಿ ಬರವಣಿಗೆ. ಹಾಗೆಯೇ ಸುಮ್ಮನೆ ಮನದಲ್ಲಿ ಮೂಡಿದ ಭಾವನೆಗಳನ್ನು ಅಕ್ಷರಕ್ಕಿಳಿಸುವುದು ಹವ್ಯಾಸ. ನಿಜವಾದ ಅನುಭವದ ಬುತ್ತಿಯೇ ಕಥೆ, ಕವನ, ಲೇಖನಗಳ ಜೀವಾಳ. ಸದ್ಯಕ್ಕೆ ಇರುವ ಊರು ಸಿಲಿಕಾನ್ ಸಿಟಿ ಬೆಂಗಳೂರು. ಹುಟ್ಟಿ ಬೆಳೆದಿದ ಸ್ಥಳ ದೇವರ ಸ್ವಂತ ನಾಡು.

Gururaj Kodkani

ವೃತ್ತಿಯಲ್ಲಿ ಇಂಜಿನಿಯರ್ ಆಗಿರುವ ಗುರುರಾಜ್, ಸಾಹಿತ್ಯದಲ್ಲಿ ಬಹಳ ಆಸಕ್ತಿಯುಳ್ಳವರು. ಯಲ್ಲಾಪುರದವರು. ಹಾಯ್ ಬೆಂಗಳೂರು ಪತ್ರಿಕೆಗೆ ಅಂಕಣ ಬರೆಯುತ್ತಿದ್ದ ಇವರು ಪ್ರಸ್ತುತ ಹಿಮಾಗ್ನಿ ಪತ್ರಿಕೆಯಲ್ಲೂ ಬರೆಯುತ್ತಿದ್ದಾರೆ. ಪುಸ್ತಕವಿಮರ್ಶೆ,ಅನುವಾದ,ವೈಜ್ನಾನಿಕ ಬರಹಗಳು ,ಜೀವನಾನುಭವದ ಲೇಖನಗಳನ್ನು ಬರೆಯುವುದು ಇವರಿಗೆ ಅಚ್ಚುಮೆಚ್ಚು.

Prashanth N Rao

Passionate in writing and a social animal. Love to innovate new things. A great food lover and a travel freak.

Shri Krishna P I

B.E, MBA. Interests in Photography, writing, riding and trekking.

Arjun Devaladakere

ಹೆಸರು ಅರ್ಜುನ್ ದೇವಾಲದಕೆರೆ , ಸ್ವಂತ ಊರು ಸಕಲೇಶಪುರ ತಾಲ್ಲೂಕಿನ ದೇವಾಲದಕೆರೆ ಎಂಬ ಮಲೆನಾಡ ಸ್ವರ್ಗ. ವಾಣಿಜ್ಯ ಮತ್ತು ವ್ಯವಹಾರ ವಿಷಯದಲ್ಲಿ ಉನ್ನತ ಪದವೀಧರ. ಸಧ್ಯಕ್ಕೆ ಬೆಂಗಳೂರಿನ ಒಂದು ಬಹುರಾಷ್ಟ್ರೀಯ ಸಾಫ್ಟ್ ವೇರ್ ಕಂಪೆನಿಯ ಉದ್ಯೋಗಿ. ಸಮಾಜಮುಖಿ ಬರಹ ಹವ್ಯಾಸ. ಸಧ್ಯ ಚಿಕ್ಕಮಗಳೂರು ಜಿಲ್ಲಾಪತ್ರಿಕೆ ದರ್ಪಣದ ಕಾಯಂ ಅಂಕಣಕಾರ. ಸತ್ಯ ಘಟನೆ ಆಧಾರಿತ "ಅವಳು" ಕಾದಂಬರಿ ಬಿಡುಗಡೆಗೆ ಸಿದ್ದವಾಗಿದೆ. ಕ್ರಿಕೆಟ್, ಫುಟ್ ಬಾಲ್ ,ಫೋಟೋಗ್ರಫಿ ಮತ್ತು ನಾಟಕಗಳಲ್ಲಿ ಅಭಿನಯ ಇತರೆ ಹವ್ಯಾಸಗಳು.

Dayananda Linge Gowda

ರೇಡಿಯೊಲೊಜಿಸ್ಟ್
ಲೇಖಕರು ಮತ್ತು ಕಾದಂಬರಿಕಾರರು

ಶ್ರೀರಾಮದಾಸ ಮನೀಶ್

ಶ್ರೀರಾಮದಾಸರೆಂದೇ ಪ್ರಸಿದ್ಧರಾಗಿರುವ ಡಾ.ಮನೀಷ್ ಮೋಕ್ಷಗುಂಡಂ, ಪಿಹೆಚ್ ಡಿ, ಶ್ರೀರಾಮನ ದಾಸತ್ವವೇ ತಮ್ಮ ಗುರುತು ಎಂದು ಸಾರಿದ್ದು, ಧ್ಯಾನ ಗುರು, ಆಧ್ಯಾತ್ಮಿಕ ಬೋಧಕ, ಪತ್ರಕರ್ತ, ವಿಶ್ಲೇಷಕ, ಜೀವನ ಮತ್ತು ನಾಯಕತ್ವದ ಕೋಚ್ , ಚಿತ್ರ ನಿರ್ಮಾಪಕ, ನಿರ್ದೇಶಕ, ಮಾಧ್ಯಮ ಲಹೆಗಾರ, ತಂದೆ,ಪತಿ, ಶಿಕ್ಷಕ ಮುಂತಾದವು ತಾವು ನಿರ್ವಹಿಸುವ ಪಾತ್ರಗಳಷ್ಟೇ ಎಂದು ನಂಬಿದ್ದಾರೆ.

Pavithra Bidkalkatte

ಪವಿತ್ರ ಬಿದ್ಕಲ್'ಕಟ್ಟೆ
ಪತ್ರಿಕೋದ್ಯಮ ವಿದ್ಯಾರ್ಥಿ
ಎಸ್.ಡಿ.ಎಮ್ ಕಾಲೇಜು ಉಜಿರೆ

Nagaraj Mukari

ಹುಟ್ಟಿದ್ದು ಬಳ್ಳಾರಿ ಜಿಲ್ಲೆಯ ಕೊಟ್ಟೂರಿನಲ್ಲಿ. ಪ್ರಸಕ್ತ ಕಾರವಾರದ ಕೈಗಾ ಅಣು ಸ್ಥಾವರದಲ್ಲಿ ನೌಕರಿ. ನಿಸರ್ಗ ಪ್ರಕಾಶನ, ಹಾಸನ ಅವರಿಂದ 2012ರಲ್ಲಿ ‘ಮಲೆನಾಡಿನ ಕಾನನ’ ಕವಿತೆಗೆ ‘ಕವನ ಕುಸುಮ’ ಪ್ರಶಸ್ತಿ. 2013ರಲ್ಲಿ ಚೊಚ್ಚಲ ಕೃತಿ ‘ನನ್ನ ಹೆಜ್ಜೆಗಳು’ ಕವನ ಸಂಕಲನ, 2016ರಲ್ಲಿ ‘ಲಾಸ್ಟ್ ಬುಕ್’ಅನುಭವ ಬರಹಗಳು ಎರಡನೇ ಕೃತಿ ಬಿಡುಗಡೆ. ಮೂರನೇ ಕೃತಿ ಹನಿಗವನ ಸಂಕಲನ ‘ಪ್ರೂಟ್ಸ್ ಸಲಾಡ್’ ಬಿಡುಗಡೆಯ ಹಂತದಲ್ಲಿ.

Nagaraj Adiga

ಮೂಲತಃ ಉಡುಪಿಯವರಾದ ನಾಗರಾಜ್ ಅಡಿಗ ಕೈಗಾದಲ್ಲಿ ವೈಜ್ಞಾನಿಕ ಅಧಿಕಾರಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಲೇಕಖನಗಳನ್ನು ಬರೆಯುವುದು, ಓದುವುದು, ಛಾಯಾಗ್ರಹಣ ಮತ್ತು ವಿಜ್ಞಾನ ಇವರ ಆಸಕ್ತಿ.

Raveesh Kemmai

ವೃತ್ತಿಯಿಂದ ಸಿವಿಲ್ ಇಂಜಿನಿಯರ್. ಪ್ರವೃತ್ತಿಯಿಂದ ಸಿನಿಮಾ ಪ್ರೇಮಿ. ಸಿನಿಮಾ ವಿಮರ್ಶೆ, ವ್ಯಂಗ್ಯಚಿತ್ರ ರಚನೆ ಬಿಡುವಿನ ಸಮಯದ ಹವ್ಯಾಸ. ಉತ್ತಮ ಚಿತ್ರಗಳಿಗೆ ಪ್ರೋತ್ಸಾಹ ಸಿಗಬೇಕು ಎನ್ನುವುದೇ ಬರಹದ ಉದ್ದೇಶ.

Vinayaka Kodsara

ಅದ್ಯಾಕೊ ಗೊತ್ತಿಲ್ಲ, ನನ್ನ ದೇಶ, ನನ್ನ ಊರು, ನನ್ನ ಅಪ್ಪ, ಅಮ್ಮ ಅಂದ್ರೆ ನನಗೆ ಮೊದಲಿನಿಂದಲೂ ಪ್ರೀತಿ. ಶಿವರಾಮ ಕಾರಂತರ ‘ಹುಚ್ಚು ಮನಸಿನ ಹತ್ತು ಮುಖಗಳು’ ಬದುಕಿನ ಕುರಿತಾಗಿ ನನಗೊಂದು ಕನಸು ಕಟ್ಟಿಕೊಟ್ಟ ಕೃತಿ. ಕಂಡಿದ್ದನ್ನು ಕಂಡ ಹಾಗೆ ಹೇಳೋದು ನನ್ನ ಸ್ವಭಾವ. ಹಾಗಾಗಿ ಕಾರಂತರು, ಓಶೋ ರಜನೀಶ, ಎಸ್.ಎಲ್ ಭೈರಪ್ಪ, ಪೂರ್ಣಚಂದ್ರ ತೇಜಸ್ವಿ…ನನ್ನಿಷ್ಟದ ಲೇಖಕರು. ನಿದ್ದೆ ಮಾಡುವುದು ಅಂದರೆ ಪಂಚಪ್ರಾಣ. ಓದು, ಯಕ್ಷಗಾನ, ಸಂಗೀತ…ಇವೆಲ್ಲ ಒಂಟಿತನದಿಂದ ನನ್ನನ್ನು ಕೆಲ ಕಾಲ ದೂರ ಇಡುತ್ತವೆ.

Namratha K

Resident of Puttur. Graduate in Civil Engineering from VTU. Worked as Civil Engineer in Bengaluru for two years. Presently in an attempt to persue Photography, a long term passion, as her career.

Sanketh D Hegde

ವೃತ್ತಿ ವಿಜ್ಞಾನ. ಬರವಣಿಗೆ ನನ್ನ ಹವ್ಯಾಸ ಅಂತ ಹೇಳಲಾರೆ. ಅದು ನನಗೊಂದು ಆಪ್ತಮಿತ್ರ. ಪ್ರಚಲಿತ ವಿದ್ಯಮಾನಗಳು ಮತ್ತು ವಿಜ್ನಾನದ ಬಗ್ಗೆ ಬರೆಯುತ್ತೇನೆ. ಹುದ್ದೆ-ಗಿದ್ದೆ ಏನಿಲ್ಲ, ಇಂಜಿನಿಯರಿಂಗ್ (ECE) ಓದುತ್ತಿದ್ದೇನೆ. ಪ್ರಶಸ್ತಿಗಳ ಗರಿಗಳೆಲ್ಲ ಇಲ್ಲ. ಕೆಲವು ರಾಜ್ಯ, ರಾಷ್ಟ್ರಮಟ್ಟಗಳ ಸ್ಪರ್ಧೆ, ಚರ್ಚೆ, ಪ್ರಬಂಧಗಳನ್ನ ಗೆದ್ದಿದ್ದೇನಷ್ಟೆ. ಇನ್ನೇನಿಲ್ಲ, ನೀವುಂಟು, ನನ್ನ ತೊದಲು ಬರಹಗಳುಂಟು. ಕನ್ನಡದ ಮೇಲಿನ ಪ್ರೀತಿ, ನನ್ನನ್ನ ಬರೆಸುತ್ತೆ!

Puneeth G

ಎಂ.ಸಿ.ಎ. ವಿದ್ಯಾಭ್ಯಾಸ ಮುಗಿಸಿ ಸೀನಿಯರ್ ಸಾಫ್ಟ್’ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಾರೆ. ಲೇಖನಗಳನ್ನು ಕಳೆದ 2 ವರ್ಷಗಳಿಂದ ಬರೆಯುತ್ತಿದ್ದು ಲೇಖನಗಳು ರಾಷ್ಟ್ರೀಯ ಹಿತಾಸಕ್ತಿಯಿಂದಕೂಡಿರುತ್ತದೆ. ದೇಶದಲ್ಲಿನ ಸ್ಥಳಿಯ ವಿದ್ಯಮಾನಗಳ ಆಗುಹೋಗುಗಳನ್ನು ವಿಮರ್ಶಿಸಿ ಬರೆಯುವುದು ಇವರ ಹವ್ಯಾಸ. ಇವರ ಲೇಖನಗಳು ಚಾಮರಾಜನಗರದ ರೇಷ್ಮೆನಾಡು, ಮೈಸೂರಿನ ಜನಮನ, ಮೈಸೂರು ವಿಜಯ, ತ್ರಿವೇಣಿಸಂಗಮ ಹಾಗೂ ಹಾಸನದ ಜನಮನದಲ್ಲಿ ಪ್ರಕಟಗೊಂಡಿರುತ್ತದೆ. ‘ವಿದ್ಯಾಸ್ಪಂದನ’ವೆಂಬ ಸಂಸ್ಥೆಯನ್ನು ಕಟ್ಟಿ ಅದರಲ್ಲಿ ಸ್ಥಳೀಯ ವಿದ್ಯಾರ್ಥಿಗಳ ವಿದ್ಯಾಭ್ಯಾಸಗಳಿಗೆ ಪ್ರೋತ್ಸಾಹ ಮಾಡುತ್ತಿದ್ದಾರೆ.

Akash Srivatsa

ಕನ್ನಡ ಚಿತ್ರರಂಗದಲ್ಲಿ ನಿರೀಕ್ಷೆ ಮೂಡಿಸುತ್ತಿರುವ ನಿರ್ದೇಶಕ. ಹಿರಿಯ ನಟ ರಮೇಶ್ ಅರವಿಂದ್ ಅವರ ಗರಡಿಯಲ್ಲಿ ಪಳಗಿರುವ ಆಕಾಶ್ “ಆಕ್ಸಿಡೆಂಟ್” ಚಿತ್ರದಲ್ಲಿ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ವೃತ್ತಿಯನ್ನಾರಂಭಿಸಿದ್ದರು. ಇವರ “ಸುಳ್ಳೇ ಸತ್ಯ- ದ ರಿಯಲ್ ಲೈ” ಕಿರುಚಿತ್ರವು ಪ್ರತಿಷ್ಟಿತ ‘Cannes film festival’ ನಲ್ಲಿ ಪ್ರದರ್ಷಿತವಾಗುವುದರೊಂದಿಗೆ ಈ ಹಿರಿಮೆಗೆ ಪಾತ್ರವಾದ ಮೊದಲ ಕನ್ನಡ ಕಿರುಚಿತ್ರವಾಗಿದೆ. ಇದೀಗ ಸದ್ಯದಲ್ಲಿ ಬಿಡುಗಡೆಗೊಳ್ಳಲಿರುವ "ಬದ್ಮಾಷ್" ಚಲನಚಿತ್ರದ ನಿರ್ದೇಶಕರಾಗಿದ್ದಾರೆ

Pramod Baliga

Engineer at Sankalp semiconductors.

Shreesha Punacha

He is from Ujire, presently lives in in muscat, Oman. He is very passionate writing about current affairs and politics.

Harshad Uday Kamath

Founder of YuvaArt & Working as R & D Head in a Private company at Dharwad. His interest falls in Photography, Painting, Digital Design & Web Designing.

Rakesh Maiya

An MBA graduate from VTU University, due to his passion for photography now he is a freelance photographer. He began his career by working for an IT company as a financial analyst for less than a year .afterwards he worked for ‘Vijayavani ‘, a number one Kannada daily newspaper as a photojournalist. Presently he is acting in a Kannada serial called “LUV LUVIKE” (in Zee Kannada).

Goutham Rati

I love reading literature works. I use to write articles and short stories which are respect to early globalization period .

Aditya Kalluraya

Driven by passion for creating platforms for people to share their opinions, experiences. A student of life, learning new things by choice. Connect on Facebook and Twitter.

Raghavendra Subramanya

ವೃತ್ತಿಯಲ್ಲಿ Human Resource Manager ಆಗಿರುವ ನಾನು, ಭಾರತ, ಯು.ಕೆ ಹಾಗೂ ಕತಾರೋಲ್ಲಂಘನ ಮಾಡಿ, ಈಗ ಸಧ್ಯಕ್ಕೆ ದುಬಾಯಿಯಲ್ಲಿ ನೆಲೆಸಿದೇನೆ. ನನ್ನ ವೃತ್ತಿಯ ಕಾರಣದಿಂದ, ಜನರೊಂದಿಗೆ ಬೆರೆಯುವ ಹಾಗೂ ಅವರನ್ನು ತಿಳಿಯುವ ಅಗತ್ಯತೆ ಮತ್ತು ಅದಕ್ಕೆ ಬೇಕಾದ ಕೌಶಲ್ಯ ಎರಡನ್ನೂ ಗಳಿಸಬೇಕಾದ ಪರಿಸ್ಥಿತಿ ಒದಗಿ ಬಂದಿದೆ. ಇದರ ಜೊತೆಗೆ ನನ್ನ ವೃತ್ತಿ ನನ್ನನ್ನು ಬೇರೆ ಬೇರೆ ದೇಶಗಳಿಗೆ ಕರೆದೊಯ್ದದ್ದರಿಂದ, ಬೇರೆ ಬೇರೆ ಸಂಸ್ಕೃತಿಗಳೂ, ಆಚರಣೆಗಳೂ ಹಾಗೂ ಅದರ ಹಿಂದಿರಬಹುದಾದ ಕಾರಣಗಳೂ ನನ್ನ ತಲೆಯಲ್ಲಿ ಸೇರಿ ಸದಾ ನನ್ನ ಕಾಡುತ್ತಿರುತ್ತವೆ. ಮನುಷ್ಯ ಹಾಗೂ ಅವನ ಸಮಾಜಮುಖಿ ಬದುಕಿನ ಕಾರಣಗಳನ್ನು ಅರಿಯುವ ಪ್ರಯತ್ನದಲ್ಲಿ ನನ್ನ ನಾನು ತೊಡಗಿಸಿಕೊಳ್ಳುತ್ತೇನೆ. ಪ್ರವೃತ್ತಿಯಲ್ಲಿ ನೆರಳು ಬೆಳಕಿನ ಆಟ(photography) ಗಳನ್ನೂ ಆಡುತ್ತೇನೆ. ರಾಜಕೀಯ ಹಾಗೂ ಪ್ರಚಲಿತ ವಿಧ್ಯಮಾನಗಳು ನನ್ನ ಕುತೂಹಲ ಕೆರಳಿಸುವ ವಿಷಯಗಳಾದರೂ ಸಹ, ವಿದ್ಯಾರ್ಥಿ ಜೀವನದಿಂದಲೂ ಸಹ ಮನಃಶಾಸ್ತ್ರ, ಸಮಾಜಶಾಸ್ತ್ರ, ಅರ್ಥಶಾಸ್ತ್ರ, ಮಾನವಶಾಸ್ತ್ರ ಹಾಗೂ ತತ್ವಶಾಸ್ತ್ರದೆಡೆಗೆ ಆಳವಾದ ಒಲವು.

Niranjan M Bhat

An Engineer by profession and a Traveler by passion. Hails from Karavali, loves Malenadu and lives in Bengaluru. Loves travelling, trekking and Riding.

Anjali Ramanna

ವಕೀಲೀ ವೃತ್ತಿಯ ಜೊತೆಗೆ ಮಹಿಳೆ ಹಾಗೂ ಮಕ್ಕಳಿಗೆ ಉತ್ತಮ ಹಾದಿಯೊಂದನ್ನು ಕಲ್ಪಿಸಲು ‘ಅಸ್ತಿತ್ವ’ ಎನ್ನುವ ಚಾರಿಟೇಬಲ್ ಟ್ರಸ್ಟ್ ನಡೆಸುತ್ತಿರುವ ಇವರು, ಗಗನ ಸಾಕ್ಷಿ – ಜೀನ್ಸ್ ಟಾಕ್ – ಲೀಗಲಿ ಯುವರ್ಸ್ ಅಂಕಣಕಾರರು. ಆಕಾಶವಾಣಿ ಕಲಾವಿದೆಯಾದ ಇವರು ೧೭೦ ಕ್ಕೂ ಮಿಕ್ಕಿ ನಾಟಕಗಳಲ್ಲಿ ಅಭಿನಯಿಸಿರುವುದಲ್ಲದೇ ಹಲವು ನಾಟಕಗಳನ್ನು ಬರೆದು ನಿರ್ದೇಶಿಸಿದ್ದಾರೆ. ಯು.ಎನ್.ಓ ದಲ್ಲಿ ಆಗ್ನೇಯ ಏಷ್ಯಾದ ಮಹಿಳೆಯರ ಕುರಿತಾಗಿ ಅಧ್ಯಯನ ನಡೆಸಿ ಡಾಕ್ಯುಮೆಂಟರಿ ಹಾಗೂ ಸ್ವಾತಂತ್ರ್ಯ ಹೋರಾಟದ ಬಗ್ಗೆ ವೀಡಿಯೋ ಡಾಕ್ಯುಮೆಂಟರಿ ಪ್ರಸ್ತುತ ಪಡಿಸಿರುವ ಇವರು, ವಿವಿಧ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಐದು ಪುಸ್ತಕಗಳ ಕರ್ತೃ, ಜೀವನ ಕೌಶಲ್ಯ ತರಬೇತಿ ನಡೆಸುವ ಅಂಜಲಿ ಅವರು ಹಲವು ವಿಶ್ವವಿದ್ಯಾನಿಲಯಗಳಿಗೆ ಅತಿಥಿ ಉಪನ್ಯಾಸಕರೂ ಹೌದು.